1.01.2017

ಎಂದೆಂದೂ ನಿನ್ನನು ಮರೆತು| ಚಿತ್ರ: ಎರಡು ಕನಸು| Endendu Ninnanu Maretu| Film: Eradu Kanasu (1974)

ಚಿತ್ರ: ಎರಡು ಕನಸು
 ಹಾಡಿದವರು: ಪಿ ಬಿ ಶ್ರೀನಿವಾಸ್, ವಾಣಿ ಜಯರಾಂ
ನಟರು: ರಾಜ್ ಕುಮಾರ್, ಕಲ್ಪನಾ, ಮಂಜುಳ


ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ
ಒಂದು ಕ್ಷಣ ನೊಂದರು ನೀ ನಾ ತಾಳಲಾರೆ
ಒಂದು ಕ್ಷಣ ವಿರಹವನು ನಾ ಸಹಿಸಲಾರೆ

ಸಾಗರ ಹುಣ್ಣಿಮೆ ಕಂಡು ಉಕ್ಕುವ ರೀತಿ
ನಿನ್ನನು ಕಂಡ ದಿನವೇ ಹೊಮ್ಮಿತು ಪ್ರೀತಿ
ಓಹೋಹೋಹೋ...ನೀ ಕಡಲಾದರೆ ನಾ ನದಿಯಾಗುವೆ
ನಿಲ್ಲದೆ ಓಡಿ ಓಡಿ ನಿನ್ನ ಸೇರುವೆ ಸೇರುವೆ ಸೇರುವೆ.....................

ನೀ ಹೂವಾದರೆ ನಾನು ಪರಿಮಳವಾಗಿ
ಸೇರುವೆ ನಿನ್ನೊಡಲನ್ನು ಬಲು ಹಿತವಾಗಿ
ಓಹೋಹೋಹೋ ನೀ ಮುಗಿಲಾದರೆ ನಾ ನವಿಲಾಗುವೆ
ತೇಲುವ ನಿನ್ನ ನೋಡಿ ನೋಡಿ ಹಾಡುವೆ ಕುಣಿಯುವೆ ನಲಿಯುವೆ.....

ಸಾವಿರ ಜನುಮವೇ ಬರಲಿ ಬೇಡುವುದೊಂದೇ
ನನ್ನವಳಾಗಿರು ನೀನು ಎನ್ನುವುದೊಂದೇ
ಓಹೋಹೋಹೋ ನೀನಿರುವುದಾದರೆ ಸ್ವರ್ಗವು ಈ ಧರೆ

ನಾನಿನ್ನ ಜೋಡಿಯಾಗಿ ಎಂದು ಬಾಳುವೆ ಬಾಳುವೆ ಬಾಳುವೆ........

ಭಲೇ ಭಲೇ ಚೆಂದದ | ಚಿತ್ರ: ಅಮೃತ ವರ್ಷಿಣಿ| Bhale Bhale Chandada| Film: Amrutavarshini (1997)

ಚಿತ್ರ: ಅಮೃತ ವರ್ಷಿಣಿ 

ಹಾಡಿದವರು: ಎಸ್ ಪಿ ಬಾಲಸುಬ್ರಮಣ್ಯಂನಟರು: ರಮೇಶ್, ಸುಹಾಸಿನಿ, ಶರತ್ ಬಾಬು
  

ಎಲ್ಲಾ ಶಿಲ್ಪಗಳಿಗು ಒಂದೊಂದು ಹಿಂದಿನ ಕಥೆಯಿದೆ
ನನ್ನ ಶಿಲ್ಪ ಚೆಲುವೆ ಇವಳ ಮುಂದೆನ್ನ ಬದುಕಿದೆ.....

ಭಲೇ ಭಲೇ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
ನಿನ್ನ ಚಂದ ಹೊಗಳಲು ಪದ ಪುಂಜ ಸಾಲದು
ನಿನ್ನ ಕಂಗಳ ಕಾಂತಿಗಳಿಂದಾನೆ ತಾನೇನೆ  ಊರೆಲ್ಲ ಹೊಂಬೆಳಕು
ನೀನು ಹೆಜ್ಜೆಯೇ ಇಟ್ಟಲ್ಲಲ್ಲೆಲ್ಲಾನು  ಕಾಲಡಿ ಹೂವಾಗಿ ಬರಬೇಕು

ತಂಪು ತಂಗಾಳಿಯು ತಂದಾನ ಹಾಡಿತು ಕೇಳೋಕೆ ನಾ ಹೋದರೆ
ನಿನ್ನ ಈ ಸರಿಗಮ ಕೇಳಿತು ಸಮಸಮ ಹಂಚಿತು
ಝುಳುಝುಳು ನೀರಿಲ್ಲಿ ತಿಲ್ಲಾನ ಹಾಡಿತು ನೋಡೋಕೆ ನಾ ಬಂದರೆ
ನಿನ್ನದೇ ಥಕಥೈ ಕಂಡಿತು ತಕದಿಮಿ ಹೆಚ್ಚಿತು
ಅಲ್ಲೊಂದು ಸುಂದರ ತೋಟವಿದೆ ಅಲ್ಲಿ ನೂರಾರು ಹೂಗಳ ರಾಶಿಯಿದೆ
ಇಲ್ಲೊಂದು ಪ್ರೀತಿಯ ಹಾಡು ಇದೆ ಇಲ್ಲಿ ಹತ್ತಾರು ಮೆಚ್ಚಿನ ಸಾಲು ಇವೆ
ಎಲ್ಲ ಸಾಲಲ್ಲು ಎಣುಕೋ ಅಕ್ಷರ ನಿಂದೇನ
ಉತ್ತರ ಇಲ್ಲದ ಸಿಹಿ ಒಗಟು ನಿನ್ನಂದ ನಿನ್ನಂದ ನಿನ್ನಂದವೇ.....

ಅತ್ತ ಕಾಳಿದಾಸ ಇತ್ತ ರವಿವರ್ಮ ನಿನ್ನ ಹಿಂದೆ ಬಂದರು
ಅಂದವ ಹೊಗಳಲು ಸಾಧ್ಯವೇ ನಿನ್ನ ಮುಂದೆ ಮೌನವೇ
ಅತ್ತ ಊರ್ವಶಿಯು ಇತ್ತ ಮೇನಕೆಯು ನಿನ್ನ ನಡೆ ಕಂಡರೆ
ನಡುವೆ ಉಳುಕುತ್ತೆ ಅಲ್ಲವೇ ನಿನ್ನ ಬಿಟ್ಟರಿಲ್ಲವೆ
ಅಲ್ಲೊಂದು ರಾಜರ ಬೀದಿಯಿದೆ ನೀನು ಅಲ್ಲಿಂದ ತೇರಲ್ಲಿ ಏರಿ ಬಂದೆ
ಇಲ್ಲೊಂದು ಹೃದಯ ಕೋಟೆಯಿದೆ ಇಲ್ಲಿ ಎಂತೆಂಥ ಕನಸೋ ಕಾವಲಿದೆ
ಎಲ್ಲ ಕಾವಲು ದಾಟಿದ ಚೋರಿಯು ನೀನೇನಾ

ಹತ್ತಿರ ಇದ್ದರು ಬಲು ಎತ್ತರ ಎತ್ತರ ನಿನ್ನಂದ ನಿನ್ನಂದವೆ......

ಜೊತೆಯಲಿ ಜೊತೆ ಜೊತೆಯಲಿ|ಚಿತ್ರ: ಗೀತ | Jotheyali Jyothejyotheyali| Film: Geeta (1981)

ಚಿತ್ರ: ಗೀತ
ಹಾಡಿದವರು: ಎಸ್ ಪಿ ಬಾಲು, ಎಸ್ ಜಾನಕಿ
ನಟರು: ಶಂಕರ್ ನಾಗ್


ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು
ಓ....ಎಂತ ಮಾತಾಡಿದೆ ಇಂದು ನೀ
ಎಂತ ಮಾತಾಡಿದೆ, ನನ್ನ ಮನಸಿನ ಭಾವನೆ ನೀನೆ ಹೇಳಿದೆ

ಪ್ರೀತಿಯೆಂದರೇನು ಎಂದು ಈಗ ಅರಿತೆನು
ಸವಿನುಡಿಯಲಿ ತನು ಅರಳಿತು ಸವಿಗನಸಲಿ ಮನ ಕುಣಿಯಿತು
ಒಲವಿನ ಈ ಮಾತಿಗೆ ಕರಗಿ ಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ..............................

ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನ ಬಿಲ್ಲೇರುವ ಜಾರುತ ನಾವಾಡುವ

ಹಗಲು ಇರುಳು ಒಂದಾಗಿ ಹಾಡುವ.............................

ಕೇಳದೆ ನಿಮಗೀಗ ದೂರದಲ್ಲಿ ಯಾರೋ| ಚಿತ್ರ: ಗೀತ (1981)| Kelade Nimageega| Film: Geeta

ಚಿತ್ರ: ಗೀತ
ಹಾಡಿದವರು: ಎಸ್ ಪಿ ಬಾಲು
ನಟರು: ಶಂಕರ್ ನಾಗ್


ಕೇಳದೆ ನಿಮಗೀಗ ದೂರದಲ್ಲಿ ಯಾರೋ 
ಹಾಡು ಹೇಳಿದಂತೆ ಒಂದು ಹೆಣ್ಣಿನ... 
ಓ..... ನೊಂದ ವಿರಹ ಗೀತೆ

ಸಂಪಿಗೆ ಒಂದೂರು ಮಲ್ಲಿಗೆ ಒಂದೂರು, ನಡುವಲ್ಲಿ ನದಿಯೊಂದು
ಹಗ್ಗದ ಉಯ್ಯಾಲೆ ತೂಗುವ ಹಾಗೊಂದು, ಸೇತುವೆಯು ಅಲ್ಲೊಂದು
ಈ ಊರ ಚೆಲುವೆ ಆ ಊರ ಚೆಲುವ, ನದಿಯಂಚಲಿ ಓಡಾಡುತ ಎದುರಾದರು ಒಮ್ಮೆ

ಚೆಲುವೆಯ ಕಂಡಾಗ ಚೆಲುವನ ಮನದಲ್ಲಿ ನೂರಾಸೆ ಬಂದಾಗ
ಚೆಲುವೆಯ ಕಣ್ಣಲ್ಲಿ ಚೆಲುವನು ಮನೆಮಾಡಿ ಶಿಲೆಯಂತೆ ನಿಂತಾಗ
ಹೂವಾಗಿ ಮನಸು ನೂರಾರು ಕನಸು ಬೆರಗಾದರು ಒಲವಿಂದಲಿ ಒಂದಾದರು ಆಗ........

ಚೆಲುವೆಯ ಮಾವಯ್ಯ ಒಲವಿನ ಕತೆ ಕೇಳಿ ಹುಲಿಯಂತೆ ಎಗರಾಡಿ
ಸೇತುವೆ ಬಳಿ ಬಂದಾಗ ಪ್ರೇಮಿಗಳ ಕಂಡಾಗ ರೋಷದಲಿ ಕೂಗಾಡಿ
ಹಲ್ಲನ್ನು ಮಸೆದ ಸೇತುವೆಯ ಕಡಿದ

ಆ ಜೋಡಿಯ ಕತೆಯಂದಿಗೆ ಕೊನೆಯಾಯಿತು ಹೀಗೆ........

ನಮ್ಮೂರ ಮಂದಾರ ಹೂವೆ|ಚಿತ್ರ: ಆಲೆಮನೆ(1981)| Nammura Mandaara Hoove| Film: Alemane

ಚಿತ್ರ: ಆಲೆಮನೆ

ನಟರು: ಸುರೇಶ ಹೆಬ್ಳಿಕರ್, ರೂಪ ಚಕ್ರವರ್ತಿ
ಗಾಯನ: ಎಸ್ ಪಿ ಬಾಲು

ನಮ್ಮೂರ ಮಂದಾರ ಹೂವೆ
ನನ್ನೊಲುಮೆ ಬಾಂದಳದ ಚೆಲುವೆ
ಬಳಿ ಬಂದು ಬಾಳನ್ನು ಬೆಳಗು
ನನ್ನ ಬರಿದಾದ ಮನದಲ್ಲಿ ಮಿನುಗು.........

ಕಣ್ಣಲ್ಲೇ ಕರೆದು ಹೊಂಗನಸ ತೆರೆದು ಸಂಗಾತಿ ಸಂಪ್ರೀತಿ ಸೆಳೆದೆ
ಅನುರಾಗ ಹೊಳೆದು ಅನುಬಂಧ ಬೆಳೆದು ಸಮ್ಮೋಹ ಸಂಬಂಧ ಮಿಡಿದೆ
ಮೂಡಿದ ಪ್ರೇಮದ ಸೊಗಸಾದ ಕಾರಂಜಿ ಬಿರಿದೆ, ಸೊಗಸಾದ ಕಾರಂಜಿ ಬಿರಿದೆ
 ನಮ್ಮೂರ ಮಂದಾರ ಹೂವೆ.........

ಒಡಲಾಳ ಮೊರೆದು ಒಡನಾಟ ಮೆರೆದು ಒಡನಾಡಿ ಬಾಂಧವ್ಯ ಕಂಡೆ
ಋತುಮಾನ ಮೀರಿ ಹೊಸಗಾನ ತೋರಿ ಹಿತವಾದ ಮಾಧುರ್ಯ ಮಿಂದೆ

ತೀರದ ಮೋಹದ ಇನಿದಾದ ಆನಂದ ತಂದೆ, ಇನಿದಾದ ಆನಂದ ತಂದೆ
ನಮ್ಮೂರ ಮಂದಾರ ಹೂವೆ........